ಶಾಂತಿ ಅಹಿಂಸೆಗಳ ಹರಿಕಾರ, ಸತ್ಯದ ಸರದಾರ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ನಿತ್ಯ ನೆನಪು

ಅಹಿಂಸೆಯ ಹಾದಿಯಲ್ಲಿ ಕ್ರಮಿಸಿ ಸದಾ ಭಾರತೀಯರ ಮನದಲ್ಲಿ ಹಚ್ಚ ಹಸಿರಾಗಿದ್ದಾರೆ ಮಹಾತ್ಮ ಗಾಂಧೀಜಿ. ಸ್ವಾತಂತ್ರ್ಯಕ್ಕಾಗಿ ದಿಟ್ಟ ಹೋರಾಟ ನಡೆಸಿದ ಗಾಂಧೀಜಿಯವರ ಸತ್ಯ ಅಹಿಂಸೆಯ ಸಿದ್ಧಾಂತ ಬೋಧನೆಗಳನ್ನು ಇಡೀ ದೇಶವೇ ಅನುಸರಿಸುತ್ತಿದೆ. ಅವರ ಆಲೋಚನೆಗಳು ಸದಾ ಜನರ ಹೃದಯದಲ್ಲಿ ನೆಲೆಸಿದೆ. ಇಂತಹ ಪುಣ್ಯ ಪುರುಷನ ಜನ್ಮ ದಿನವನ್ನು ಅಕ್ಟೋಬರ್ 2ರಂದು ಆಚರಿಸಲಾಗುತ್ತದೆ. ಈ ಸಂದರ್ಭದಲ್ಲಿ ನಮ್ಮ ರಾಷ್ಟ್ರಪಿತ ಗಾಂಧೀಜಿಯವರ ಬದುಕು, ಸಾಧನೆ, ಚಳುವಳಿ, ಸಿದ್ದಾಂತಗಳು, ಬರಹಗಳ ಬಗ್ಗೆ ತಿಳಿಯೋಣ ಬನ್ನಿ.

ಶಾಂತಿ ಅಹಿಂಸೆಗಳ ಹರಿಕಾರ, ಸತ್ಯದ ಸರದಾರ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ನಿತ್ಯ ನೆನಪು
Linkup

ಅಹಿಂಸೆಯ ಹಾದಿಯಲ್ಲಿ ಕ್ರಮಿಸಿ ಸದಾ ಭಾರತೀಯರ ಮನದಲ್ಲಿ ಹಚ್ಚ ಹಸಿರಾಗಿದ್ದಾರೆ ಮಹಾತ್ಮ ಗಾಂಧೀಜಿ. ಸ್ವಾತಂತ್ರ್ಯಕ್ಕಾಗಿ ದಿಟ್ಟ ಹೋರಾಟ ನಡೆಸಿದ ಗಾಂಧೀಜಿಯವರ ಸತ್ಯ ಅಹಿಂಸೆಯ ಸಿದ್ಧಾಂತ ಬೋಧನೆಗಳನ್ನು ಇಡೀ ದೇಶವೇ ಅನುಸರಿಸುತ್ತಿದೆ. ಅವರ ಆಲೋಚನೆಗಳು ಸದಾ ಜನರ ಹೃದಯದಲ್ಲಿ ನೆಲೆಸಿದೆ. ಇಂತಹ ಪುಣ್ಯ ಪುರುಷನ ಜನ್ಮ ದಿನವನ್ನು ಅಕ್ಟೋಬರ್ 2ರಂದು ಆಚರಿಸಲಾಗುತ್ತದೆ. ಈ ಸಂದರ್ಭದಲ್ಲಿ ನಮ್ಮ ರಾಷ್ಟ್ರಪಿತ ಗಾಂಧೀಜಿಯವರ ಬದುಕು, ಸಾಧನೆ, ಚಳುವಳಿ, ಸಿದ್ದಾಂತಗಳು, ಬರಹಗಳ ಬಗ್ಗೆ ತಿಳಿಯೋಣ ಬನ್ನಿ. 

ಭಾರತೀಯರ ಮನಸ್ಸಿನಲ್ಲಿ ಅಚ್ಚಳಿಯದೇ ಸದಾ ಶಾಶ್ವತವಾಗಿರುವ ಹೆಸರು ಅಂದರೆ ಅದು ಎಂದೆಂಗಿಗೂ ಮಹತ್ಮಾರಾಗಿರುವ ಗಾಂಧೀಜಿ. ಗಾಂಧಿಯವರ ಬದುಕೊಂದು ಶಾಂತಿ-ಹೋರಾಟಗಳ ಮಹಾಗಾಥೆ. ಸತ್ಯಕ್ಕಾಗಿ ನಿರಂತರ ಅನ್ವೇಷಣೆ, ಪ್ರತಿಯೊಬ್ಬರು ಸಮಾನರು ಎಂಬ ನೆಲೆಯಲ್ಲಿ ವಸಾಹತುಶಾಹಿಯ ಎದುರು ಸ್ವಾತಂತ್ರ್ಯಕ್ಕಾಗಿ ದಿಟ್ಟ ಹೋರಾಟ ಇವುಗಳೆಲ್ಲ ರಾಷ್ಟ್ರಪಿತನನ್ನು ಜಾಗತಿಕ ನಾಯಕರಲ್ಲಿ ಮೊದಲಿನ ಸ್ಥಾನಕ್ಕೇರಿಸಿದೆ. ದಂಡಿಸತ್ಯಾಗ್ರಹ. ಉಪ್ಪಿನ ಸತ್ಯಾಗ್ರಹ, ಕ್ವಿಟ್‌ ಇಂಡಿಯಾ ಚಳವಳಿಯಂತಹ ಅನೇಕ ಹೋರಾಟಗಳ ಮೂಲಕ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಗಾಂಧೀಜಿಯವರ ಹುಟ್ಟುಹಬ್ಬವನ್ನು ನಾಡಿನಾದ್ಯಂತ ಪ್ರತಿವರ್ಷ ಅಕ್ಟೋಬರ್ 2ರಂದು ಆಚರಿಸಲಾಗುತ್ತದೆ. 

ಗಾಂಧಿಯವರ ಜನನ, ಜೀವನ 

ಅಕ್ಟೋಬರ್ 2, 1869ರಲ್ಲಿ ಗುಜರಾತ್ ನ ಪೋರಬಂದರ್ ನಲ್ಲಿ ಗಾಂಧೀಜಿಯವರ ಜನನವಾಯ್ತು. ಇವರ ತಂದೆ ಕರಮಚಂದ್ ಗಾಂಧಿ, ತಾಯಿ ಪುತಲೀಬಾಯಿ. 13 ನೆಯ ವಯಸ್ಸಿನಲ್ಲಿ ಗಾಂಧೀಜಿ ಕಸ್ತೂರಿ ಬಾ ಅವರನ್ನು ವಿವಾಹವಾದರು. ಇವರಿಗೆ ನಾಲ್ಕು ಮಕ್ಕಳು ಜನಿಸಿದರು, ಹರಿಲಾಲ್ ಗಾಂಧಿ, ಮಣಿಲಾಲ್ ಗಾಂಧಿ , ರಾಮದಾಸ್ ಗಾಂಧಿ ಮತ್ತು ದೇವದಾಸ್ ಗಾಂಧಿ. ತನ್ನ 19 ನೇ ವಯಸ್ಸಿನಲ್ಲಿ ಗಾಂಧೀಜಿ ಲಂಡನ್ ನ ಯೂನಿವರ್ಸಿಟಿ ಕಾಲೇಜಿನಿಂದ ಕಾನೂನು ಪದವಿ ಪಡೆದರು. 

ಗಾಂಧಿಜೀಯವರ ಹೋರಾಟ, ಚಳುವಳಿಗಳು 

ಗಾಂಧೀಜಿವರ ತತ್ವಗಳಿಗೆ ಮುಖ್ಯ ಸ್ಫೂರ್ತಿ ಭಗವದ್ಗೀತೆ, ರಷ್ಯಾದ ಪ್ರಸಿದ್ಧ ಸಾಹಿತಿ ಲಿಯೋ ಟಾಲ್‍ಸ್ಟಾಯ್ ಅವರ ಬರಹಗಳು. ಅಮೆರಿಕ ನ್ಸಾಹಿತಿ ಹೆನ್ರಿ ಡೇವಿಡ್ ಥೋರ್ಯೂ ನ ಪ್ರಬಂಧ 

ಮೊದಲನೆಯ ಮಹಾಯುದ್ಧದ ಸಮಯದಲ್ಲಿ ಗಾಂಧೀಜಿಯವರು ಭಾರತಕ್ಕೆ ಮರಳಿ ಭಾರತೀಯರು ಬ್ರಿಟಿಷರ ಪರವಾಗಿ ಯುದ್ಧದಲ್ಲಿ ಭಾಗವಹಿಸುವಂತೆ ಕೇಳಿಕೊಂಡು ಇದಕ್ಕಾಗಿ ಪ್ರಚಾರ ಮಾಡಿದರು. ಯುದ್ಧದ ನಂತರ ಗಾಂಧೀಜಿಯವರು ಭಾರತ ರಾಷ್ಟ್ರೀಯ ಕಾಂಗ್ರೆಸ್ ನ ಜೊತೆ ಸ್ವಾತಂತ್ರ್ಯ ಚಳುವಳಿಗೆ ಧುಮುಕಿದರು. 

ಉಪವಾಸ ಸತ್ಯಾಗ್ರಹ ಮತ್ತು ಅಸಹಕಾರ ಚಳುವಳಿಗಳ ಮೂಲಕ ಪ್ರಪಂಚದಾದ್ಯಂತ ಖ್ಯಾತಿ ಗಳಿಸಿದರು. ಹಲವಾರು ಬಾರಿ ಬ್ರಿಟಿಷ್ ಸರ್ಕಾರ ಇವರನ್ನು ಬಂಧನದಲ್ಲಿರಿಸಿತು. ಗಾಂಧೀಜಿಯವರ ಯಶಸ್ವಿ ಸತ್ಯಾಗ್ರಹಗಳಲ್ಲಿ ಇನ್ನೊಂದೆಂದರೆ ಸ್ವದೇಶಿ ಚಳುವಳಿ – ಪರದೇಶಗಳಲ್ಲಿ ಉತ್ಪಾದಿತವಾದ ವಸ್ತುಗಳನ್ನು, ಅದರಲ್ಲಿ ಮುಖ್ಯವಾಗಿ ಬ್ರಿಟಿಷ್ ವಸ್ತುಗಳನ್ನು, ವರ್ಜಿಸಿ ಭಾರತದಲ್ಲಿ ಉತ್ಪಾದಿಸಲಾದ ವಸ್ತುಗಳನ್ನು ಮಾತ್ರ ಬಳಸುವಂತೆ ಕೇಳಿಕೊಂಡರು. 

ಗಾಂಧೀಜಿ ಉತ್ತಮ ಮಾತುಗಾರ, ಬರಹಗಾರ 

ಗಾಂಧೀಜಿ ಉತ್ತಮ ಮಾತುಗಾರರು ಹಾಗೂ ಬರಹಗಾರರು ಆಗಿದ್ದರು. ದಕ್ಷಿಣ ಆಫ್ರಿಕಾದಲ್ಲಿದ್ದಾಗ ಇಂಡಿಯನ್ ಒಪೀನಿಯನ್‌ ಪತ್ರಿಕೆ, ಭಾರತಕ್ಕೆ ಮರಳಿದ ನಂತರ ಗುಜರಾತಿ, ಹಿಂದಿ ಮತ್ತು ಆಂಗ್ಲಭಾಷೆಗಳಲ್ಲಿ ಹರಿಜನ್‌ ಪತ್ರಿಕೆ, ಆಂಗ್ಲಭಾಷೆಯಲ್ಲಿ ಯಂಗ್ ಇಂಡಿಯಾ ಪತ್ರಿಕೆ ಮತ್ತು ನವಜೀವನ್‌‌‌ ಎಂಬ ಗುಜರಾತಿ ಮಾಸಪತ್ರಿಕೆಯೂ ಸೇರಿದಂತೆ ಹಲವು ವೃತ್ತಪತ್ರಿಕೆಗಳಿಗೆ ಸಂಪಾದಕರಾಗಿದ್ದರು. 

ಆತ್ಮಚರಿತ್ರೆಯಾದ ಆನ್‌ ಆಟೋಬಯೊಗ್ರಫಿ ಆಫ್ ಮೈ ಎಕ್ಸ್‌ಪರಿಮೆಂಟ್ಸ್‌ ವಿತ್‌ ಟ್ರೂತ್‌ ಸೇರಿದಂತೆ, ದಕ್ಷಿಣ ಆಫ್ರಿಕಾದಲ್ಲಿನ ತಮ್ಮ ಹೋರಾಟದ ಕುರಿತಾದ ಸತ್ಯಾಗ್ರಹ ಇನ್‌ ಸೌತ್‌ ಆಫ್ರಿಕಾ ಎಂಬ ಪುಸ್ತಕ, ಹಿಂದ್ ಸ್ವರಾಜ್ ಆರ್‌ ಇಂಡಿಯನ್‌ ಹೋಮ್‌ ರೂಲ್‌ ಎಂಬ ರಾಜಕೀಯ ಕಿರುಹೊತ್ತಿಗೆ ಅವುಗಳಲ್ಲಿ ಸೇರಿದೆ 

ರಾಷ್ಟ್ರಪಿತನ ಕೊನೆಯ ದಿನಗಳು 

ಎಲ್ಲಾ ಮಹಾನ್ ಗಣ್ಯರ ಶ್ರಮದ ಫಲ ಕೊನೆಗೂ 1947 ಅಗಸ್ಟ್ 15ರಂದು ಭಾರತಕ್ಕೆ ಸ್ವಾತಂತ್ರ್ಯ ದೊರಕಿತು. 1948 ಜನೆವರಿ 30ರಂದು ನಾಥೂ ರಾಂ ವಿನಾಯಕ ಗೋಡ್ಸೆ ಎಂಬಾತ ಪ್ರಾರ್ಥನ ಮಂದಿರಕ್ಕೆ ಹೋಗುವ ಸಂದರ್ಭದಲ್ಲಿ ಗಾಂಧೀಜಿ ಎದೆಗೆ ಗುಂಡಿಕ್ಕಿದ. ಹೇರಾಮ್ ಎನ್ನುತ್ತಾ ನಮ್ಮೆಲ್ಲರ ನೆಚ್ಚಿನ ರಾಷ್ಟ್ರಪಿತ ಕೊನೆಯುಸಿರೆಳೆದರು. ಗಾಂಧೀಜಿ ಇಡೀ ದೇಶಕ್ಕೆ ಒಂದು ಮಹಾನ್ ಶಕ್ತಿಯಾಗಿದ್ದರು. ಭಾರತಕ್ಕೆ ಸ್ವಾತಂತ್ರ್ಯ ತರಲು ಹಾಗೂ ರಾಮರಾಜ್ಯ ಸ್ಥಾಪಿಸಲು ತಮ್ಮ ಜೀವನವನ್ನೇ ತೆತ್ತರು. ಆದರೆ ಇಂದಿಗೂ ದೇಶದ ಪ್ರತಿಯೊಬ್ಬರ ಎದೆಯಲ್ಲೂ ಮಹಾತ್ಮ ಗಾಂಧಿ ಅಮರರಾಗಿದ್ದಾರೆ.