ಶೀನಾ ಬೋರಾ ಕೊಲೆ ಪ್ರಕರಣ: ತನಿಖೆ ಅಂತ್ಯಗೊಳಿಸುವುದಾಗಿ ಹೇಳಿದ ಸಿಬಿಐ

ದೇಶಾದ್ಯಂತ ಭಾರಿ ಕುತೂಹಲ ಮೂಡಿಸಿದ್ದ ಶೀನಾ ಬೋರಾ ಕೊಲೆ ಪ್ರಕರಣದ ಮುಂದಿನ ತನಿಖೆಯನ್ನು ಅಂತ್ಯಗೊಳಿಸಿರುವುದಾಗಿ ಮುಂಬಯಿ ವಿಶೇಷ ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ ನೀಡಿದೆ.

ಶೀನಾ ಬೋರಾ ಕೊಲೆ ಪ್ರಕರಣ: ತನಿಖೆ ಅಂತ್ಯಗೊಳಿಸುವುದಾಗಿ ಹೇಳಿದ ಸಿಬಿಐ
Linkup
ಮುಂಬಯಿ: ದೇಶಾದ್ಯಂತ ಭಾರಿ ಕುತೂಹಲ ಮೂಡಿಸಿದ್ದ ಕೊಲೆ ಪ್ರಕರಣವನ್ನು ಅಂತ್ಯಗೊಳಿಸಲು ನಿರ್ಧರಿಸಿದೆ. 2015ರಲ್ಲಿ ಬಯಲಾಗಿದ್ದ 2012ರ ಕೊಲೆ ಪ್ರಕರಣದ ಮುಂದಿನ ತನಿಖೆಯನ್ನು ಸ್ಥಗಿತಗೊಳಿಸಲು ನಿರ್ಧರಿಸಿರುವುದಾಗಿ ವಿಶೇಷ ನ್ಯಾಯಾಲಯಕ್ಕೆ ಸಿಬಿಐ ತಿಳಿಸಿದೆ ಎಂದು ಮೂಲಗಳು ಹೇಳಿವೆ. ಶೀನಾ ಬೋರಾ ತಾಯಿ ಇಂದ್ರಾಣಿ ಮುಖರ್ಜಿಯನ್ನು ತನಿಖೆಯ ಸಂದರ್ಭದಲ್ಲಿ ಆರೋಪಪಟ್ಟಿಯಲ್ಲಿ ಹೆಸರಿಸಿದ್ದ ಸಿಬಿಐ, ಎರಡು ಪೂರಕ ಆರೋಪಪಟ್ಟಿಗಳು ಸೇರಿದಂತೆ ಒಟ್ಟು ಮೂರು ಆರೋಪಪಟ್ಟಿಗಳನ್ನು ಸಲ್ಲಿಸಿತ್ತು. ಈ ಪ್ರಕರಣ ವಿಚಾರಣೆ ಹಂತದಲ್ಲಿದೆ. ತನ್ನ ಮೊದಲ ಪತಿಯ ಮಗಳಾದ 25 ವರ್ಷದ ಶೀನಾ ಬೋರಾಳನ್ನು ಕೊಲೆ ಮಾಡಿದ ಆರೋಪದಲ್ಲಿ ಟಿವಿ ಚಾನೆಲ್ ಒಂದರ ಮಾಜಿ ಮಾಲಕಿ ಇಂದ್ರಾಣಿ ಮುಖರ್ಜಿಯನ್ನು 2015ರಲ್ಲಿ ಬಂಧಿಸಲಾಗಿತ್ತು. ಇಂದ್ರಾಣಿಗೆ ಸಹಕರಿಸಿದ ಆರೋಪದಲ್ಲಿ ಮೂರು ತಿಂಗಳ ಬಳಿಕ ಆಕೆಯ ಎರಡನೆಯ ಪತಿ ಪೀಟರ್ ಮುಖರ್ಜಿಯನ್ನು ಬಂಧಿಸಲಾಗಿತ್ತು. ಬೇರೆ ಪ್ರಕರಣವೊಂದರಲ್ಲಿ ಬಂಧಿತನಾಗಿದ್ದ ಚಾಲಕ ಶ್ಯಾಮವರ್ ರೈ ಎಂಬಾತನ ವಿಚಾರಣೆ ವೇಳೆ ಶೀನಾ ಬೋರಾ ಕೊಲೆ ಸಂಗತಿ ಬಯಲಿಗೆ ಬಂಧಿತ್ತು. ಶ್ಯಾಮವರ್ ಈ ಪ್ರಕರಣದಲ್ಲಿಯೂ ಆರೋಪಿಯಾಗಿದ್ದಾನೆ. ಸುಮಾರು 60 ಪ್ರತ್ಯಕ್ಷದರ್ಶಿಗಳಿಂದ ಹೇಳಿಕೆ ದಾಖಲಿಸಲಾಗಿತ್ತು. ಕಾರಿನಲ್ಲಿ ಕೊಲೆ ಮಾಡಿದ್ದರುಈ ಕೊಲೆಯಲ್ಲಿ ಇಂದ್ರಾಣಿಯ ಮೊದಲ ಪತಿ ಸಂಜೀವ್ ಖನ್ನಾ ಕೂಡ ಆರೋಪಿಯಾಗಿದ್ದಾರೆ. 2012ರ ಏಪ್ರಿಲ್‌ನಲ್ಲಿ ಇಂದ್ರಾಣಿ ಮುಖರ್ಜಿ, ಸಂಜೀವ್ ಖನ್ನಾ ಹಾಗೂ ಶ್ಯಾಮವರ್ ರೈ ಕಾರಿನಲ್ಲಿ ಶೀನಾ ಬೋರಾ ಕತ್ತು ಹಿಸುಕಿ ಕೊಲೆ ಮಾಡಿದ್ದರು. ಬಳಿಕ ರಾಯಗಡ ಜಿಲ್ಲೆಯ ಕಾಡೊಂದರಲ್ಲಿ ಆಕೆಯ ಮೃತದೇಹವನ್ನು ಸುಟ್ಟುಹಾಕಿದ್ದರು. ಏನಿದು ಪ್ರಕರಣ?ಶೀನಾ ಮತ್ತು ಮಿಖಾಯಿಲ್ ಇಬ್ಬರೂ ಇಂದ್ರಾಣಿಯ ಮೊದಲ ಸಂಬಂಧದಿಂದ ಜನಿಸಿದ ಮಕ್ಕಳಾಗಿದ್ದರು. ಆದರೆ ಅವರಿಬ್ಬರ ಬಗ್ಗೆ ರಹಸ್ಯ ಕಾಪಾಡಿಕೊಂಡಿದ್ದ ಇಂದ್ರಾಣಿ, ಗುವಾಹಟಿಯಲ್ಲಿನ ತನ್ನ ಪೋಷಕರ ಜತೆ ಅವರಿಬ್ಬರನ್ನೂ ಇರಿಸಿದ್ದಳು. ಶೀನಾ ಮುಂಬಯಿಗೆ ಬಂದಾಗ, ಆಕೆಗೆ ಇಂದ್ರಾಣಿಯ ಸಹೋದರಿಯ ಮಗಳು ಎಂದು ಹೇಳಿಕೊಳ್ಳಬೇಕು ಮತ್ತು ತನ್ನ ಗುರುತು ಬಹಿರಂಗಪಡಿಸಬಾರದು ಎಂಬ ಷರತ್ತು ವಿಧಿಸಲಾಗಿತ್ತು. ಆದರೆ ಇಂದ್ರಾಣಿಯನ್ನು ಶೀನಾ ಬ್ಲ್ಯಾಕ್‌ಮೇಲ್ ಮಾಡಲು ಆರಂಭಿಸಿದ್ದಳು. ಹೀಗಾಗಿ ಆಕೆಯನ್ನು ಮೊದಲ ಪತಿ ಜತೆಗೂಡಿ ಕೊಲೆ ಮಾಡಲಾಯಿತು. ಮಿಖಾಯಿಲ್‌ನನ್ನೂ ಕೊಲ್ಲಲು ಸಂಚು ರೂಪಿಸಲಾಗಿತ್ತು. ಹತ್ಯೆಗೆ ಸಹಕರಿಸಿದ ಆರೋಪದಲ್ಲಿ ಬಂಧಿತನಾಗಿದ್ದ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾನೆ. ಇಂದ್ರಾಣಿ ಮತ್ತು ಪೀಟರ್ 2002ರಲ್ಲಿ ಮದುವೆಯಾಗಿದ್ದರು. 2019ರ ಅಕ್ಟೋಬರ್‌ನಲ್ಲಿ ಇಬ್ಬರೂ ವಿಚ್ಛೇದನ ಪಡೆದುಕೊಂಡಿದ್ದಾರೆ.