ಸಿಎಂ ಪರಿಹಾರ ನಿಧಿಗೆ 25 ಲಕ್ಷ ರೂಪಾಯಿ ದೇಣಿಗೆ ನೀಡಿದ ವಿಜಯ್ ಸೇತುಪತಿ

ತಮಿಳುನಾಡು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನಟ ವಿಜಯ್ ಸೇತುಪತಿ 25 ಲಕ್ಷ ರೂಪಾಯಿ ಕೊಟ್ಟಿದ್ದಾರೆ.

ಸಿಎಂ ಪರಿಹಾರ ನಿಧಿಗೆ 25 ಲಕ್ಷ ರೂಪಾಯಿ ದೇಣಿಗೆ ನೀಡಿದ ವಿಜಯ್ ಸೇತುಪತಿ
Linkup
ತಮಿಳು ನಟ 25 ಲಕ್ಷ ರೂಪಾಯಿ ದೇಣಿಗೆ ನೀಡಿದ್ದಾರೆ. ತಮಿಳುನಾಡು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನಟ ವಿಜಯ್ ಸೇತುಪತಿ 25 ಲಕ್ಷ ರೂಪಾಯಿ ಕೊಟ್ಟಿದ್ದಾರೆ. ಸಿಎಂ ಎಂ.ಕೆ.ಸ್ಟಾಲಿನ್‌ರನ್ನು ಭೇಟಿ ಮಾಡಿದ ವಿಜಯ್ ಸೇತುಪತಿ 25 ಲಕ್ಷ ರೂಪಾಯಿಯ ಚೆಕ್‌ಅನ್ನು ಹಸ್ತಾಂತರಿಸಿದ್ದಾರೆ. ಕೋವಿಡ್ ಎರಡನೇ ಅಲೆಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಸೂಕ್ತ ವ್ಯವಸ್ಥೆ ರೂಪಿಸಲು ದೇಣಿಗೆ ನೀಡುವಂತೆ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಕೋರಿದ್ದರು. ಇದರ ಪರಿಣಾಮ ತಮಿಳು ನಟ ಸೂರ್ಯ, ಕಾರ್ತಿ, ರಜನಿಕಾಂತ್, ಸೌಂದರ್ಯ ರಜನಿಕಾಂತ್, ವಿಕ್ರಂ, ಶಿವಕಾರ್ತಿಕೇಯನ್, ಅಜಿತ್, ನಿರ್ದೇಶಕ ಎ.ಆರ್.ಮುರುಗದಾಸ್ ಮುಂತಾದ ತಾರೆಯರು ತಮಿಳುನಾಡು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ದೇಣಿಗೆ ನೀಡಿದ್ದರು. ತಮಿಳು ನಟರಾದ ಸೂರ್ಯ, ಕಾರ್ತಿ ಮತ್ತು ತಂದೆ ಶಿವಕುಮಾರ್ ಒಂದು ಕೋಟಿ ರೂಪಾಯಿ ದೇಣಿಗೆ ನೀಡಿದ್ದರು. ತಮಿಳು ನಟ ಅಜಿತ್ 25 ಲಕ್ಷ ರೂಪಾಯಿ ಕೊಟ್ಟಿದ್ದರು. ಸೂಪರ್ ಸ್ಟಾರ್ ರಜಿನಿಕಾಂತ್ 50 ಲಕ್ಷ ರೂಪಾಯಿಯ ಚೆಕ್ ಹಸ್ತಾಂತರಿಸಿದ್ದರು. ಸೌಂದರ್ಯ ರಜಿನಿಕಾಂತ್ ಮತ್ತು ಕುಟುಂಬ ಒಂದು ಕೋಟಿ ವರ್ಗಾವಣೆ ಮಾಡಿದ್ದರು. ಶಿವಕಾರ್ತಿಕೇಯನ್, ಎ.ಆರ್.ಮುರುಗದಾಸ್ ತಲಾ 25 ಲಕ್ಷ ರೂಪಾಯಿ ನೀಡಿದ್ದರು. ಇದೀಗ ವಿಜಯ್ ಸೇತುಪತಿ 25 ಲಕ್ಷ ರೂಪಾಯಿ ನೀಡಿದ್ದಾರೆ. ಅಂದ್ಹಾಗೆ, ತಮಿಳು ನಟ ವಿಜಯ್ ಸೇತುಪತಿ ಕೈಯಲ್ಲಿ ಸಾಕಷ್ಟು ಪ್ರಾಜೆಕ್ಟ್‌ಗಳಿವೆ. 'ಲಾಭಂ', 'ತುಘಲಕ್ ದರ್ಬಾರ್' ಹಾಗೂ ವೇಟ್ರಿಮಾರನ್ ನಿರ್ದೇಶನದ ಚಿತ್ರಗಳಲ್ಲಿ ವಿಜಯ್ ಸೇತುಪತಿ ಬಿಜಿಯಾಗಿದ್ದಾರೆ.