ಸೆಪ್ಟೆಂಬರ್ 22ರಂದು ಸಿನಿ ಪ್ರಿಯರಿಗೆ ಸಿಗಲಿದೆ ಹಬ್ಬದೂಟ ಸವಿದಷ್ಟೇ ಖುಷಿ ನೀಡುವ ಸುದ್ದಿ!

ಸೆಪ್ಟೆಂಬರ್ 22 ರಂದು ತಮ್ಮ ಸಂಸ್ಥೆಯಿಂದ ನಿರ್ಮಾಣ ಆಗುವ ಹೊಸ ಚಿತ್ರವನ್ನು ಹೊಂಬಾಳೆ ಫಿಲ್ಮ್ಸ್ ಘೋಷಿಸಲಿದೆ. ಹೊಂಬಾಳೆ ಫಿಲ್ಮ್ಸ್ ನಿರ್ಮಾಣ ಮಾಡುವ 12ನೇ ಚಿತ್ರದ ಘೋಷಣೆ ಸೆಪ್ಟೆಂಬರ್ 22 ರಂದು ಮಧ್ಯಾಹ್ನ 3.10ಕ್ಕೆ ಆಗಲಿದೆ.

ಸೆಪ್ಟೆಂಬರ್ 22ರಂದು ಸಿನಿ ಪ್ರಿಯರಿಗೆ ಸಿಗಲಿದೆ ಹಬ್ಬದೂಟ ಸವಿದಷ್ಟೇ ಖುಷಿ ನೀಡುವ ಸುದ್ದಿ!
Linkup
ಕನ್ನಡ ಚಿತ್ರರಂಗಕ್ಕೆ ಸೂಪರ್ ಡ್ಯೂಪರ್ ಹಿಟ್ ಚಿತ್ರಗಳನ್ನು ನೀಡಿ ಜನಪ್ರಿಯತೆ ಗಳಿಸಿರುವ ನಿರ್ಮಾಪಕ ಅವರ ಸಂಸ್ಥೆ ಇದೀಗ ಹೊಸ ಪ್ರಾಜೆಕ್ಟ್‌ಗೆ ಕೈಹಾಕಿದೆ. ಬ್ಯಾಕ್ ಟು ಬ್ಯಾಕ್ ಹೊಸ ಸಿನಿಮಾಗಳನ್ನು ಘೋಷಿಸುತ್ತಿರುವ ಹೊಂಬಾಳೆ ಫಿಲ್ಮ್ಸ್ ಸಂಸ್ಥೆ ಇನ್ನೆರಡು ದಿನಗಳಲ್ಲಿ ಮತ್ತೊಂದು ಸಿನಿಮಾವನ್ನು ಘೋಷಿಸಲಿದೆ. ಸೆಪ್ಟೆಂಬರ್ 22 ರಂದು ಕಾದಿದೆ ಬ್ರೇಕಿಂಗ್ ನ್ಯೂಸ್ ಸೆಪ್ಟೆಂಬರ್ 22 ರಂದು ತಮ್ಮ ಸಂಸ್ಥೆಯಿಂದ ನಿರ್ಮಾಣ ಆಗುವ ಹೊಸ ಚಿತ್ರವನ್ನು ಹೊಂಬಾಳೆ ಫಿಲ್ಮ್ಸ್ ಘೋಷಿಸಲಿದೆ. ಹೊಂಬಾಳೆ ಫಿಲ್ಮ್ಸ್ ನಿರ್ಮಾಣ ಮಾಡುವ 12ನೇ ಚಿತ್ರದ ಘೋಷಣೆ ಸೆಪ್ಟೆಂಬರ್ 22 ರಂದು ಮಧ್ಯಾಹ್ನ 3.10ಕ್ಕೆ ಆಗಲಿದೆ. ಹೊಂಬಾಳೆ ಫಿಲ್ಮ್ಸ್ ನಿರ್ಮಾಣ ಮಾಡುವ 12ನೇ ಚಿತ್ರ ಯಾವುದು? ಹೊಂಬಾಳೆ ಫಿಲ್ಮ್ಸ್ ನಿರ್ಮಾಣ ಮಾಡುವ 12ನೇ ಚಿತ್ರ ಯಾವುದು ಎಂಬ ಪ್ರಶ್ನೆಗೆ ಸದ್ಯಕ್ಕೆ ಉತ್ತರ ಸಿಕ್ಕಿಲ್ಲ. ಈ ಚಿತ್ರ ಯಾವುದಾಗಿರಬಹುದು ಎಂದು ಅಭಿಮಾನಿಗಳು ಹಾಗೂ ಸಿನಿ ಪ್ರಿಯರು ತಲೆಗೆ ಹುಳ ಬಿಟ್ಟುಕೊಂಡಿದ್ದಾರೆ. ಇಂದು ಹೊಂಬಾಳೆ ಫಿಲ್ಮ್ಸ್ ಮಾಡಿರುವ ಟ್ವೀಟ್‌ನಲ್ಲಿ ಬಾಳೆ ಎಲೆ ಮೇಲೆ ‘’ಪ್ರತಿಯೊಬ್ಬರಲ್ಲೂ ಹಸಿವಿದೆ. ಪ್ರತಿ ಅಗಳಿನಲ್ಲೂ ತಿನ್ನುವವರ ಹೆಸರಿದೆ. ‘’ಅನ್ನದಾತೋ ಸುಖೀಭವ’’ ಅಂತ ಬರೆಯಲಾಗಿರುವ ಚಿತ್ರವಿದೆ. ಇದನ್ನ ನೋಡಿದ ಅಭಿಮಾನಿಗಳಿಗೆ ಸದಭಿರುಚಿಯ ಚಿತ್ರವನ್ನೇ ಹೊಂಬಾಳೆ ಫಿಲ್ಮ್ಸ್ ಘೋಷಿಸಲಿದ್ದಾರೆ ಎಂಬ ನಿರೀಕ್ಷೆ ಇದೆ ಎನ್ನುತ್ತಿದ್ದಾರೆ. ಸಾಲು ಸಾಲು ಚಿತ್ರ ಘೋಷಿಸಿರುವ ಹೊಂಬಾಳೆ ಫಿಲ್ಮ್ಸ್ ಹೊಂಬಾಳೆ ಫಿಲ್ಮ್ಸ್ ಅಡಿಯಲ್ಲಿ ನಿರ್ಮಾಪಕ ವಿಜಯ್ ಕಿರಗಂದೂರು ನಿರ್ಮಾಣ ಮಾಡಿದ ಮೊದಲ ಚಿತ್ರ ‘ನಿನ್ನಿಂದಲೇ’. 2014ರಲ್ಲಿ ಪುನೀತ್ ರಾಜ್‌ಕುಮಾರ್ ನಟನೆಯ ‘ನಿನ್ನಿಂದಲೇ’ ಚಿತ್ರ ತೆರೆಗೆ ಬಂದಿತ್ತು. ಬಳಿಕ ರಾಕಿಂಗ್ ಸ್ಟಾರ್ ಯಶ್ ನಟನೆಯ ‘ಮಾಸ್ಟರ್‌ ಪೀಸ್’ ಚಿತ್ರವನ್ನು ಹೊಂಬಾಳೆ ಫಿಲ್ಮ್ಸ್ ನಿರ್ಮಿಸಿತ್ತು. 2017ರಲ್ಲಿ ಹೊಂಬಾಳೆ ಫಿಲ್ಮ್ಸ್ ಅಡಿಯಲ್ಲಿ ವಿಜಯ್ ಕಿರಗಂದೂರು ನಿರ್ಮಾಣ ಮಾಡಿದ ‘ರಾಜಕುಮಾರ’ ಚಿತ್ರ ಸೂಪರ್ ಡ್ಯೂಪರ್ ಹಿಟ್ ಆಯ್ತು. ಕನ್ನಡ ಚಿತ್ರರಂಗದಲ್ಲೇ ಅತಿ ಹೆಚ್ಚು ಕಲೆಕ್ಷನ್ ಮಾಡಿದ ಚಿತ್ರಗಳ ಪೈಕಿ ‘ರಾಜಕುಮಾರ’ ಚಿತ್ರವೂ ಒಂದು ಎನಿಸಿಕೊಂಡಿತು. 2018ರಲ್ಲಿ ವಿಜಯ್ ಕಿರಗಂದೂರು ನಿರ್ಮಾಣ ಮಾಡಿದ ‘ಕೆಜಿಎಫ್: ಚಾಪ್ಟರ್ 1’ ಚಿತ್ರ ಪ್ಯಾನ್ ಇಂಡಿಯಾ ಲೆವೆಲ್‌ನಲ್ಲಿ ಭರ್ಜರಿ ಕಲೆಕ್ಷನ್ ಮಾಡ್ತು. ಈ ವರ್ಷ ಹೊಂಬಾಳೆ ಫಿಲ್ಮ್ಸ್ ಸಂಸ್ಥೆಯಿಂದ ‘ಯುವರತ್ನ’ ಚಿತ್ರ ತೆರೆಗೆ ಬಂತು. ಇಲ್ಲಿಯವರೆಗೂ ಹೊಂಬಾಳೆ ಫಿಲ್ಮ್ಸ್ ನಿರ್ಮಾಣದ ಐದು ಚಿತ್ರಗಳು ತೆರೆಗೆ ಬಂದಿವೆ. ಸದ್ಯಕ್ಕೆ ಹೊಂಬಾಳೆ ಫಿಲ್ಮ್ಸ್ ನಿರ್ಮಾಣದಲ್ಲಿ ಆರು ಚಿತ್ರಗಳು ಘೋಷಣೆಯಾಗಿ ವಿವಿಧ ಹಂತಗಳಲ್ಲಿವೆ. ವಿಜಯ್ ಕಿರಗಂದೂರು ನಿರ್ಮಾಣದ ‘ಕೆಜಿಎಫ್: ಚಾಪ್ಟರ್ 2’ ಬಿಡುಗಡೆಗೆ ಸಿದ್ಧವಾಗಿದ್ದರೆ, ‘ಸಲಾರ್’ ಚಿತ್ರ ಶೂಟಿಂಗ್ ಹಂತದಲ್ಲಿದೆ. ಇನ್ನೂ, ‘ಭಗೀರ’, ‘ದ್ವಿತ್ವ’, ‘ರಿಚರ್ಡ್ ಆಂಟನಿ’, ‘ಕಾಂತಾರ’ ಚಿತ್ರಗಳು ಹೊಂಬಾಳೆ ಫಿಲ್ಮ್ಸ್ ಅಡಿಯಲ್ಲಿ ಘೋಷಣೆಯಾಗಿವೆ. ಹೀಗಿರುವಾಗಲೇ, ಹೊಸ ಚಿತ್ರವನ್ನು ಘೋಷಿಸಲು ಹೊಂಬಾಳೆ ಫಿಲ್ಮ್ಸ್ ಸಿದ್ಧತೆ ನಡೆಸಿದೆ. ಹೊಂಬಾಳೆ ಫಿಲ್ಮ್ಸ್ ನಿರ್ಮಾಣ ಮಾಡುವ 12ನೇ ಚಿತ್ರದ ಘೋಷಣೆ ಸೆಪ್ಟೆಂಬರ್ 22ರಂದು ಆಗಲಿದೆ. ಅನೌನ್ಸ್ ಆಗುತ್ತಾ ಸಂತೋಷ್ ಆನಂದ್‌ರಾಮ್-ಪುನೀತ್ ರಾಜ್‌ಕುಮಾರ್ ಕಾಂಬಿನೇಶನ್‌ನ ಮೂರನೇ ಚಿತ್ರ? ‘ರಾಜಕುಮಾರ’ ಮತ್ತು ‘ಯುವರತ್ನ’ ಚಿತ್ರಗಳ ಬಳಿಕ ನಿರ್ದೇಶಕ ಸಂತೋಷ್ ಆನಂದ್‌ರಾಮ್ ಮತ್ತು ಪುನೀತ್ ರಾಜ್‌ಕುಮಾರ್ ಮತ್ತೆ ಕೈಜೋಡಿಸಿದ್ದಾರೆ. ಪುನೀತ್ ರಾಜ್‌ಕುಮಾರ್ ಜೊತೆಗಿನ ತಮ್ಮ ಮೂರನೇ ಚಿತ್ರವನ್ನು ಹೊಂಬಾಳೆ ಫಿಲ್ಮ್ಸ್ ನಿರ್ಮಾಣ ಮಾಡಲಿದೆ ಎಂದು ನಿರ್ದೇಶಕ ಸಂತೋಷ್ ಆನಂದ್‌ರಾಮ್ ಇತ್ತೀಚೆಗಷ್ಟೇ ಟ್ವೀಟ್ ಮಾಡಿದ್ದರು. ಈಗ ನೋಡಿದ್ರೆ, ಹೊಸ ಚಿತ್ರದ ಹೆಸರು ಮತ್ತು ಫಸ್ಟ್ ಲುಕ್‌ಅನ್ನು ಸೆಪ್ಟೆಂಬರ್ 22ರಂದು ಮಾಡುವುದಾಗಿ ಹೊಂಬಾಳೆ ಫಿಲ್ಮ್ಸ್ ತಿಳಿಸಿದೆ. ಹಾಗಾದ್ರೆ, ಪುನೀತ್ ರಾಜ್‌ಕುಮಾರ್ ಮತ್ತು ಸಂತೋಷ್ ಆನಂದ್‌ರಾಮ್ ಕಾಂಬಿನೇಶನ್‌ನ ಮೂರನೇ ಚಿತ್ರದ ಶೀರ್ಷಿಕೆ ಹಾಗೂ ಫಸ್ಟ್ ಲುಕ್‌ಅನ್ನೇ ಹೊಂಬಾಳೆ ಫಿಲ್ಮ್ಸ್ ಸೆಪ್ಟೆಂಬರ್ 22ರಂದು ಘೋಷಿಸುತ್ತಾ? ಎಂಬ ಅನುಮಾನವೂ ಅಪ್ಪು ಅಭಿಮಾನಿಗಳಿಗೆ ಕಾಡುತ್ತಿದೆ.