ಸ್ವೆಟರ್ ಹಗರಣ: 'ನಾನು ತಪ್ಪು ಮಾಡಿಲ್ಲ, ಮಾಡುವುದೂ ಇಲ್ಲ' ಎಂದು ಗುಡುಗಿದ ಜಗ್ಗೇಶ್

ಸ್ವೆಟರ್ ಹಗರಣಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ಅಧಿಕಾರಿಗಳು ಹಾಗೂ ಕೋಮಲ್ ವಿರುದ್ಧ ಹಣ ಅವ್ಯವಹಾರದ ಆರೋಪ ಮಾಡಿದ್ದಾರೆ ದಲಿತ ಸಂಘರ್ಷ ಸಮಿತಿಯ ಅಧ್ಯಕ್ಷ ಸಿ.ಎಸ್.ರಘು. ಇನ್ನೂ, ಆರ್.ಅಶೋಕ್ ಹಾಗೂ ಜಗ್ಗೇಶ್ ಒತ್ತಡ ಹಾಕಿಸಿ ಹಣ ಬಿಡುಗಡೆ ಮಾಡಿಸಿದ್ದರು ಅಂತಲೂ ಸಿ.ಎಸ್.ರಘು ಆರೋಪಿಸಿದ್ದಾರೆ. ಇದೀಗ ಈ ಬಗ್ಗೆ ನಟ ಜಗ್ಗೇಶ್ ಪ್ರತಿಕ್ರಿಯೆ ನೀಡಿದ್ದಾರೆ. ಸಿ.ಎಸ್.ರಘು ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸುವುದಾಗಿ ತಿಳಿಸಿದ್ದಾರೆ.

ಸ್ವೆಟರ್ ಹಗರಣ: 'ನಾನು ತಪ್ಪು ಮಾಡಿಲ್ಲ, ಮಾಡುವುದೂ ಇಲ್ಲ' ಎಂದು ಗುಡುಗಿದ ಜಗ್ಗೇಶ್
Linkup
ನವರಸ ನಾಯಕ ಹಾಗೂ ಅವರ ಸಹೋದರ ನಟ ವಿರುದ್ಧ ಭ್ರಷ್ಟಾಚಾರದ ಆರೋಪ ಕೇಳಿಬಂದಿದೆ. ಸ್ವೆಟರ್ ಹಗರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳು ಹಾಗೂ ಕೋಮಲ್ ವಿರುದ್ಧ ಹಣ ಅವ್ಯವಹಾರದ ಆರೋಪ ಮಾಡಿದ್ದಾರೆ ದಲಿತ ಸಂಘರ್ಷ ಸಮಿತಿಯ ಅಧ್ಯಕ್ಷ ಸಿ.ಎಸ್.ರಘು. ಇನ್ನೂ, ಆರ್.ಅಶೋಕ್ ಹಾಗೂ ಜಗ್ಗೇಶ್ ಒತ್ತಡ ಹಾಕಿಸಿ ಹಣ ಬಿಡುಗಡೆ ಮಾಡಿಸಿದ್ದರು ಅಂತಲೂ ಸಿ.ಎಸ್.ರಘು ಆರೋಪಿಸಿದ್ದಾರೆ. ಇದೀಗ ಈ ಬಗ್ಗೆ ನಟ ಜಗ್ಗೇಶ್ ಪ್ರತಿಕ್ರಿಯೆ ನೀಡಿದ್ದಾರೆ. ಸಿ.ಎಸ್.ರಘು ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸುವುದಾಗಿ ತಿಳಿಸಿದ್ದಾರೆ. ಸರಣಿ ಟ್ವೀಟ್ ಮಾಡಿದ್ದಾರೆ ನಟ ಜಗ್ಗೇಶ್ ಈ ವಿವಾದದ ಕುರಿತಾಗಿ ನಟ ಜಗ್ಗೇಶ್ ಸರಣಿ ಟ್ವೀಟ್ ಮಾಡಿದ್ದಾರೆ. ''ನಾನು ಉತ್ತಮ ಎಂದು ಅಧಮರಿಗೆ ಎದೆಬಗೆದು ವ್ಯರ್ಥ ತೋರಿಕೆ ಏಕೆಬೇಕು. ಆನೆ ರಾಜಮಾರ್ಗದಲ್ಲಿ ಆಗಲಿ, ಗಲ್ಲಿಯಲ್ಲಾಗಲಿ ನಡೆಯುವಾಗ ನಾಯಿ ಬೊಗಳುವುದು ಸಹಜ. ನಮ್ಮ ಗುಣ ಆನೆಯಂತೆ ಇದ್ದಾಗ ಬೊಗಳುವ ನಾಯಿಗಳ ಸಮಕ್ಕೆ ನಾವು ಇಳಿಯಬಾರದು. ಆಕಸ್ಮಿಕ ಸಿಟ್ಟಿಗೆ ಇಳಿದರೆ ನಮ್ಮ ಆನೆಯ ಸ್ಥಾನ ನಾಯಿಗೆ ಸಮ ಆಗುತ್ತದೆ. ನಾನು ಕಲಿತ ನೀತಿಪಾಠ ಇಂದಿನ ಸಮಾಜದ ನಡೆಗೆ!'' ಎಂದು ಜಗ್ಗೇಶ್ ಟ್ವೀಟಿಸಿದ್ದಾರೆ. ''ಸಂಬಂಧವಿಲ್ಲದೆ ನನ್ನ ಹೆಸರು ಹಾಗೂ ಆರ್.ಅಶೋಕ್ ರವರ ಹೆಸರು ತೆಗೆದು ಎಂಬುವರು ಅಪಮಾನಿಸಿದ್ದಾರೆ. ಇದು ನನಗೆ ಬಹಳ ನೋವುಂಟು ಮಾಡಿದೆ. ಹಾಗಾಗಿ ಸಂಬಂಧವಿಲ್ಲದೆ ನನ್ನ ಮೇಲೆ ಸುಳ್ಳು ಆಪಾದನೆ ಮಾಡಿರುವ ಮಾನ್ಯ ರಘುರವರ ಮೇಲೆ ಮಾನನಷ್ಟ ಆಪಾದನೆ ದಾಖಲಿಸುತ್ತಿರುವೆ. ದಯಮಾಡಿ ಯಾರೇ ಆಗಲಿ ಸತ್ಯ ಅರಿತು ನುಡಿಯುವ ಗುಣ ಬೆಳೆಸಿಕೊಳ್ಳಿ'' ''ಸತ್ಯಾಸತ್ಯತೆ ನನ್ನ ಬಗ್ಗೆ ಅರಿಯದೆ ನನ್ನ ತೇಜೋವಧೆ ಮಾಧ್ಯಮದ ಮುಂದೆ ಮಾಡಿದ್ದೀರಿ. ನಾನು ತಪ್ಪು ಮಾಡಿಲ್ಲ, ಮಾಡುವುದೂ ಇಲ್ಲ. ಹಾಗಾಗಿ ನಿಮ್ಮ ಮೇಲೆ ಕಾನೂನು ಪ್ರಕ್ರಿಯೆ. ಯಾರೋ ಎಲ್ಲಾ ಮಾಡಿದ ವಿಷಯಕ್ಕೆ ನನ್ನ ಹೆಸರು ಏಕೆ ತಂದಿರಿ. ನೀವು ನ್ಯಾಯಪರ ಹೋರಾಟ ಮಾಡಿ ನನ್ನ ಬೆಂಬಲವು ಇರುತ್ತದೆ. ಆದರೆ ನನಗೂ ಇದಕ್ಕೂ ಯಾವ ಸಂಬಂಧವಿಲ್ಲ. ಆದರೂ ನನ್ನ ಹೆಸರು ಏಕೆ ತಂದಿರಿ. ಯಾವ ಪುರುಷಾರ್ಥಕ್ಕೆ? ನಾನು ತಪ್ಪು ಮಾಡಿಲ್ಲ. ತಲೆಯೂ ಬಾಗಿಸೋಲ್ಲ. ನನ್ನ ಕೋಟ್ಯಾಂತರ ಅಭಿಮಾನಿಗಳಿಗೆ ತಪ್ಪು ಸಂದೇಶ ರವಾನಿಸುವ ಕಾರ್ಯ ಮಾಡಿದ್ದೀರಿ. ಕ್ಷಮೆಯಿಲ್ಲಾ'' ''ಮೈಬಗ್ಗಿಸಿ ದುಡಿದು ತಿನ್ನುವ ಗುಣ ಕಮ್ಮಿಯಾಗಿ ಅನಾಚಾರ ಜೀವನ ಮಾಡುವವರಿಗೆ ಸರಿಯಾದ ಮಾರ್ಗದಲ್ಲಿ ಬದುಕುವವರ ಕಂಡರೆ ಅವರನ್ನು ಸಾಲಿಗೆ ಎಳೆಯಲು ಯತ್ನಿಸುತ್ತಾರೆ. ತಾನು ಕಳ್ಳನಾದರೆ ಲೋಕವೆಲ್ಲ ಕಳ್ಳರನ್ನು ಮಾಡುವುದು ಕಳ್ಳರ ಲಕ್ಷಣ. ನೆನಪಿಡಿ ಕಲುಷಿತ ಕೆಸರಲ್ಲಿ ನಾನು ಕಮಲದಂತೆ ರಾಯರದಯೆಯಿಂದ ಮೇಲೆ ಬಂದು ಬಾಳುತ್ತಿರುವೆ. ಅಣಕವೆ ನನ್ನ ಯಶಸ್ಸು'' ಎಂದು ನಟ ಜಗ್ಗೇಶ್ ಟ್ವೀಟ್ ಮಾಡಿದ್ದಾರೆ. ಸಿ.ಎಸ್.ರಘು ಮಾಡಿರುವ ಆರೋಪವೇನು? ''2020-21ನೇ ಸಾಲಿನಲ್ಲಿ ಬಿಬಿಎಂಪಿ ಮಕ್ಕಳಿಗೆ ಸ್ವೆಟರ್‌ಗಳನ್ನು ನೀಡಲು ಅನುದಾನ ಮೀಸಲಿಟ್ಟಿದ್ದು, ಟೆಂಡರ್ ಕರೆಯದೆ 4ಜಿ ವಿನಾಯತಿ ಪಡೆದು ಕರ್ನಾಟಕ ಕೈಮಗ್ಗ ನಿಗಮಕ್ಕೆ ಸ್ವೆಟರ್‌ಗಳನ್ನು ಸರಬರಾಜು ಮಾಡಲು ಆದೇಶ ನೀಡಲಾಗಿತ್ತು. ಕೋವಿಡ್ ಕಾರಣದಿಂದ ಶಾಲೆಗಳು ಮುಚ್ಚಲಾಗಿದ್ದು, ಮಕ್ಕಳಿಗೆ ಸ್ವೆಟರ್ ವಿತರಣೆ ಮಾಡದೆ ಹಣ ಲೂಟಿ ಮಾಡಲಾಗಿದೆ. ಸ್ವೆಟರ್ ಹಂಚುವ ಟೆಂಡರ್‌ಅನ್ನು ಕೋಮಲ್ ಪಡೆದುಕೊಂಡಿದ್ದರು. ಆರ್.ಅಶೋಕ್ ಹಾಗೂ ಜಗ್ಗೇಶ್ ಒತ್ತಡ ಹಾಕಿಸಿ ಹಣ ಬಿಡುಗಡೆ ಮಾಡಿಸಿದ್ದರು. ಸ್ವೆಟರ್‌ಗಳನ್ನು ವಿದ್ಯಾರ್ಥಿಗಳಿಗೆ ನೀಡಲಾಗಿದೆ ಎಂದು 1.76 ಕೋಟಿ ರೂಪಾಯಿ ಹಣವನ್ನು ಪಾವತಿ ಮಾಡಲಾಗಿದೆ'' ಎಂದು ದಲಿತ ಸಂಘರ್ಷ ಸಮಿತಿಯ ಅಧ್ಯಕ್ಷ ಸಿ.ಎಸ್.ರಘು ಆರೋಪ ಮಾಡಿದ್ದಾರೆ. ಕೋಮಲ್ ಹೇಳಿದ್ದೇನು? ''ಬಿಬಿಎಂಪಿ ಟೆಂಡರ್‌ಗಳನ್ನು ಖಾಸಗಿ ವ್ಯಕ್ತಿಗಳಿಗೆ ನೀಡುವುದಿಲ್ಲ. ಈ ಟೆಂಡರ್‌ಗೂ ನನಗೂ ಯಾವುದೇ ಸಂಬಂಧವಿಲ್ಲ. ನಾನು ಟೆಂಡರ್ ಪಡೆದಿಲ್ಲ. ನನ್ನ ಹಾಗೂ ನನ್ನ ಅಣ್ಣನ ಹೆಸರನ್ನು ಇಲ್ಲಿ ಅನವಶ್ಯಕವಾಗಿ ತರಲಾಗುತ್ತಿದೆ. ವಿನಾಕಾರಣ ನನ್ನ ವಿರುದ್ಧ ಆರೋಪ ಮಾಡುತ್ತಿರುವವರ ಮೇಲೆ ನಾನು ಮಾನನಷ್ಟ ಮೊಕದ್ದಮೆ ದಾಖಲಿಸುತ್ತೇನೆ'' ಎಂದು ನಟ ಕೋಮಲ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.