ಸ್ವಾತಂತ್ರ್ಯ ದಿನಾಚರಣೆ ಅಮೃತ ಮಹೋತ್ಸವ: ಆಕಾಶವಾಣಿಯಿಂದ ವಿಶೇಷ ರಸಪ್ರಶ್ನೆ

ಭಾರತದ ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಣೆ ಹಿನ್ನೆಲೆಯಲ್ಲಿ ಬೆಂಗಳೂರು ಆಕಾಶವಾಣಿ ಸುದ್ದಿ ವಿಭಾಗವು ವಿಶೇಷ ಸಾಪ್ತಾಹಿಕ ರಸಪ್ರಶ್ನೆ ಕಾರ್ಯಕ್ರಮವನ್ನು ಆಯೋಜಿಸುತ್ತಿದೆ.

ಸ್ವಾತಂತ್ರ್ಯ ದಿನಾಚರಣೆ ಅಮೃತ ಮಹೋತ್ಸವ: ಆಕಾಶವಾಣಿಯಿಂದ ವಿಶೇಷ ರಸಪ್ರಶ್ನೆ
Linkup
ಬೆಂಗಳೂರು: ಸ್ವಾತಂತ್ರ್ಯದ ಅಮೃತ ಮಹೋತ್ಸವ ಅಂಗವಾಗಿ ಆಕಾಶವಾಣಿಯ ಸುದ್ದಿ ವಿಭಾಗ ಪ್ರತೀ ಭಾನುವಾರ ಸಂಜೆ 6:40 ರ ಪ್ರದೇಶ ಸಮಾಚಾರದಲ್ಲಿ ಸಾಪ್ತಾಹಿಕ ವಿಶೇಷ ಕಾರ್ಯಕ್ರಮ ಆಯೋಜಿಸುತ್ತಿದೆ. ದೇಶದ ಸ್ವಾತಂತ್ರ್ಯ ಹೊರಾಟಕ್ಕೆ ಕನ್ನಡ ನಾಡಿನ ಕೊಡುಗೆ, ಸ್ವಾತಂತ್ರ್ಯ ಹೋರಾಟಗಾರರು ಹಾಗೂ ಘಟನೆಗಳ ಕುರಿತ ರಸಪ್ರಶ್ನೆಗಳನ್ನು ಕಾರ್ಯಕ್ರಮದಲ್ಲಿ ಕೇಳುತ್ತಿದ್ದು ಸೂಕ್ತ ಉತ್ತರ ನೀಡಿ ವಿಜೇತರಾದವರಿಗೆ ಪ್ರಮಾಣಪತ್ರ ನೀಡಿ ಗೌರವಿಸಲಾಗುತ್ತದೆ ಎಂದು ಬೆಂಗಳೂರು ಸುದ್ದಿ ವಿಭಾಗದ ಉಪ ನಿರ್ದೇಶಕರಾದ ಟಿ.ಬಿ. ನಂಜುಂಡಸ್ವಾಮಿ ತಿಳಿಸಿದ್ದಾರೆ. 2023ರ ಆಗಸ್ಟ್ 15 ರವರೆಗೆ ನಡೆಯಲಿರುವ ರಸಪ್ರಶ್ನೆ ಕಾರ್ಯಕ್ರಮದ ಮೂರು ಸಂಚಿಕೆಗಳು ಈಗಾಗಲೇ ಪೂರ್ಣಗೊಂಡಿವೆ. ವಿದ್ಯಾರ್ಥಿಗಳು ಜನಸಾಮಾನ್ಯರಲ್ಲಿ ಸ್ವಾತಂತ್ರ್ಯ ಹೋರಾಟದ ಅರಿವು ಮೂಡಿಸುವ ನಿಟ್ಟಿನಲ್ಲಿ ನಡೆಸಲಾಗುತ್ತಿರುವ ಕಾರ್ಯಕ್ರಮದಲ್ಲಿ ಕೇಳುಗರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಅವರು ಮನವಿ ಮಾಡಿದ್ದಾರೆ. ಆಕಾಶವಾಣಿಯಲ್ಲಿ ಸಂಜೆ 6.40ಕ್ಕೆ ಪ್ರಸಾರವಾಗುವ ಪ್ರದೇಶ ಸಮಾಚಾರದಲ್ಲಿ ಪ್ರತಿ ಭಾನುವಾರದಂದು ಸಾಪ್ತಾಹಿಕ ವಿಶೇಷ ರಸಪ್ರಶ್ನೆ ಕಾರ್ಯಕ್ರಮವನ್ನು ಆಯೋಜಿಸುತ್ತಿದೆ. ಜನಸಾಮಾನ್ಯರಲ್ಲಿ ಸ್ವಾತಂತ್ರ್ಯ ಹೋರಾಟದ ಅರಿವು ಮೂಡಿಸುವ ನಿಟ್ಟಿನಲ್ಲಿ ನಡೆಸಲಾಗುತ್ತಿರುವ ಈ ಕಾರ್ಯಕ್ರಮದಲ್ಲಿ ಕೇಳುಗರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಬೆಂಗಳೂರು ಆಕಾಶವಾಣಿ ಸುದ್ದಿ ವಿಭಾಗದ ಮುಖ್ಯಸ್ಥ ಟಿ.ವಿ ನಂಜುಂಡಸ್ವಾಮಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.